Thursday, June 10, 2010
ನಗರ ಪಾಲಿಕೆ ಮತ್ತು ಕಾರ್ಯ ದಕ್ಷತೆ
ನೀವು ಮೇಲೆ ನೋಡುತ್ತಿರುವುದು ಬೆಂಗಳೂರಿನ ಬಿನ್ನಿ ಮಿಲ್ ರಸ್ತೆಯಲ್ಲಿ ದಿನಾಂಕ ೦೮-೦೬-೨೦೧೦ರಂದು ಬೆಳಿಗ್ಗೆ ನಾನು ಕಂಡ ಹೃದಯ ವಿದ್ರಾವಕ ದೃಶ್ಯ. ದನವೊಂದು ಅಪಘಾತಕ್ಕೆ ಈಡಾಗಿ ಸತ್ತು ಬಿದ್ದಿದೆ. ಅದನ್ನು ಎರಡು ದಿನವಾದರೂ ಸಂಬಂಧ ಪಟ್ಟವರು ತೆಗೆದಿಲ್ಲ. ಅದೇ ದಾರಿಯಲ್ಲಿ ಓಡಾಡುವ ಸರಕಾರಿ ವಾಹನಗಳು, ಪೋಲೀಸರು ಕೂಡಾ ಅದರ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ.
ಆ ದನ ಕೊಳೆತು ನಾರುತ್ತಿದೆ. ನಾಯಿ, ಕಾಗೆಗಳು ಅದರ ಮಾಂಸವನ್ನು ಕಚ್ಚಿ ಕಚ್ಚಿ ಎಳೆದು ತಿನ್ನುತ್ತಿವೆ. ಕೆಲ ಸಮಯದ ನಂತರ ಆ ನಾಯಿಗಳಿಗೆ ಹುಚ್ಚು ಹಿಡಿಯುವ ಸಾಧ್ಯತೆಯೂ ಇಲ್ಲದಿಲ್ಲ. ಆ ನಾಯಿಗಳು ದಾರಿಹೋಕರಿಗೆ ಕಚ್ಚದೇ ಇಅರಲು ಸಾಧ್ಯವೇ ಇಲ್ಲ. ಈ ದನ ಸತ್ತು ಇವತ್ತಿಗೆ ಮೂರು ದಿನ ಆದರೂ ಯಾರೂ ಅದರ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ ಅಂದರೆ ನಮ್ಮ ದರಿದ್ರ ಕರ್ನಾಟಕ ಸರಕಾರ, ದರಿದ್ರ ಬಿ.ಬಿ.ಎಂ.ಪಿ.ಗಳು ನಿದ್ದೆ ಮಾಡುತ್ತಿವೆಯೇ?. ಇದನ್ನು ನಾನು ಸಮೀಪದಲ್ಲೇ ಇದ್ದ ಪೋಲೀಸರಿಗೆ ತಿಳಿಸಿದರೂ ಅವರು ಅಸಡ್ಡೆ ಮಾಡಿರುತ್ತಾರೆ.
"ರೀ...ಅದು ನಮ್ಮೆ ಕೆಲಸ ಅಲ್ಲ. ಕಾರ್ಪೋರೇಶನ್ ಅಫೀಸಿಗೆ ಫೋನ್ ಮಾಡಿ ಹೇಳಿ. ಆ ಬೋಳೀ ಮಕ್ಳೇ ಇಲ್ಲಿ ತಂದು ಹಾಕಿರುತ್ತಾರೆ." ಎಂಬ ಮಾತು ಹೇಳಿದರು. ಅವರ ನಂಬರ್ ಕೊಡಿ ಎಂದರೆ...."ನಮಗೆ ಗೊತ್ತಿಲ್ಲ" ಎಂಬ ಹಾರಿಕೆಯ ಉತ್ತರ ಬೇರೆ.
ಇವತ್ತು ಸರಕಾರದ ಕಾರ್ಯ ದಕ್ಷತೆ ಸತ್ತು ಹೋಗಿದೆ. ದುಡ್ಡು ಕೊಡದೆ ಯಾವ ಕೆಲಸವೂ ಆಗುವುದಿಲ್ಲ. ಆದರೆ ಇಂತಹ ಸಾರ್ವಜನಿಕರಿಗೆ ಸಂಬಂಧಿಸಿದ ವಿಷಯಕ್ಕೂ ಇದು ಅನ್ವಯವಾದರೆ, ಈ ಸರಕಾರ ಇದ್ದೂ ಸತ್ತಂತೆ. ಒಬ್ಬ ಅಪ್ರಯೋಜಕ ಮುಖ್ಯಮಂತ್ರಿ, ಭ್ರಷ್ಟ ಮಂತ್ರಿಗಳನ್ನು ಒಳಗೊಂಡಿರುವ ಈ ಸರಕಾರ ಸಾರ್ವಜನಿಕರ ಬಗ್ಗೆ ಇನ್ನೆಷ್ಟು ಕಾಳಜಿ ತೋರಿಸಬಹುದು?.
ಮೇಲ್ವಿಳಾಸ :
bangalore,
bbmp,
karnataka,
ನಮ್ಮ ಕರ್ನಾಟಕ
Friday, June 04, 2010
ಕನ್ನಡ ಹಾಗೂ ಕರ್ನಾಟಕ ದ್ರೋಹಿಗಳು
ಬೆಂಗಳೂರಿನಲ್ಲಿ ನಡೆಯುತ್ತಿರುವ ಬಂಡವಾಳ ಹೂಡಿಕೆ ಸಮ್ಮೇಳನ ಈಗ ರೈತರ ಎದೆಯಲ್ಲಿ ಭಾರೀ ಭಯ ಹುಟ್ಟಿಸಿದೆ. ಬಂಡವಾಳ ಹೂಡಿಕೆಯ ನೆಪದಲ್ಲಿ ಉದ್ಯೋಗ ಸೃಷ್ಟಿಯಾದರೂ ನಮ್ಮ ರೈತರಿಗೆ ಚಿಕ್ಕಾಸಿನ ಉಪಯೋಗವೂ ಇಲ್ಲ.
ಇನ್ನು ಶುರುವಾಗುತ್ತೆ ನೋಡಿ, ಈ ಸರಕಾರ ರೈತರ ಜಮೀನು ಸ್ವಾಧೀನಪಡಿಸಿಕೊಳ್ಳುವುದರ ಜೊತೆಗೆ, ರೈತರಿಗೆ ಸೇರಬೇಕಾದ ನೀರು, ವಿದ್ಯುತ್ ಮುಂತಾದವುಗಳನ್ನು ಕಸಿದುಕೊಂಡು ಕರ್ನಾಟಕ ರಾಜ್ಯದ ರೈತರಿಗೆ ಛಡಿ ಏಟು ನೀಡುತ್ತದೆ. ಈ ಬಿ.ಜೆ.ಪಿ. ಸರಕಾರ ಯಾಕಾದರೂ ಬಂತು ಎಂದು ರೈತರು ಹಣೆ ಹಣೆ ಚಚ್ಚಿಕೊಳ್ಳುತ್ತಿದ್ದಾರೆ. ದೇವರೇ..ಈ ರಾಜ್ಯವನ್ನು ಈ ಬಿ.ಜೆ.ಪಿ. ಎಂಬ ಕನ್ನಡ ವಿರೋಧಿ, ಕರ್ನಾಟಕ ವಿರೋಧಿ ಹಾಗೂ ರೈತ ವಿರೋಧಿ ಸರಕಾರದಿಂದ ಯಾರು ಕಾಪಾಡುತ್ತಾರೋ?. ಸಾಂಸ್ಕೃತಿಕ ಸೂಳೆಗಾರಿಕೆ ನಡೆಸುತ್ತಿರುವ ಐ.ಟಿ ಹಾಗೂ ಬಿ.ಟಿ. ಮಂದಿಯಿಂದ ನಮ್ಮ ರಾಜ್ಯವನ್ನು ರಕ್ಷಿಸುವವರಾರು?. ಕೇವಲ ಉದ್ಯೋಗ ಸೃಷ್ಟಿಯ ನೆಪದಿಂದ ರೈತರನ್ನು ದಮನಿಸುವ ಕೆಲಸ ಈ ಸರಕಾರ ಅಚ್ಚುಕಟ್ಟಾಗಿ ಮಾಡುತ್ತಿದೆ. ಆ ಉದ್ಯೋಗದಲ್ಲಿ ಕನ್ನಡಿಗರ ಪಾಲು ಖಂಡಿತಾ ನಗಣ್ಯ. ಏಕೆಂದರೆ ಈ ಕನ್ನಡ ವಿರೋಧಿ, ದರಿದ್ರ ಕರ್ನಾಟಕ ಸರಕಾರ ಭಾಷಾ ಅಲ್ಪಸಂಖ್ಯಾತರಿಗೆ ಮಣೆ ಹಾಕಿ ತಾನು ಮಾತ್ರ ಈ ದೇಶವನ್ನು ಪ್ರೀತಿಸುವ ಜಾತ್ಯಾತೀತ ಪಕ್ಷ ಎಂಬುದನ್ನು ಈ ಜಗತ್ತಿಗೆ ತೋರಿಸುವ ಒಂದು ನೀಚ ಕೆಲಸ ಮಾಡುತ್ತಿದೆ.
ಈ ಯಡಿಯೂರಪ್ಪ ಈಗ ರೆಡ್ಡಿ ಸಹೋದರರ ಕೃಪಾಕಟಾಕ್ಷದಿಂದ ತಾನು ಕೂಡಾ ರಾಜ್ಯವನ್ನು ಲೂಟಿ ಮಾಡುವತ್ತ ಒಂದು ಹೆಜ್ಜೆ ಮುಂದೆ ಹೋಗಿದ್ದಾನೆ. ಈ ಬಿ.ಜೆ.ಪಿ. ಗೂಂಡಾಗಳಿಗೆ ಜನ ಸರಿಯಾದ ಪಾಠ ಕಲಿಸದಿದ್ದರೆ, ಮುಂದೆ ಕರ್ನಾಟಕದಲ್ಲಿ ಕನ್ನಡಿಗರೇ ಇಲ್ಲದಂತಾಗುತ್ತದೆ. ಕಾಶ್ಮೀರದಲ್ಲಿ ಹೇಗೆ ಹಿಂದೂಗಳು ಇಲ್ಲವೋ, ಅದೇ ರೀತಿ ಕರ್ನಾಟಕದಲ್ಲಿ ಕನ್ನಡಿಗರೂ ಬದುಕುವುದು ಕಷ್ಟವಾಗುತ್ತದೆ. ಬಿ.ಬಿ.ಎಂ.ಪಿ. ಚುನಾವಣೆಯಲ್ಲಿ ಹಣ ಹೆಂಡ ಹಂಚಿ ಕಾಂಗ್ರೆಸ್ ಸಂಸ್ಕೃತಿಯನ್ನು ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಅಳವಡಿಸಿಕೊಂಡು ಚುನಾವಣೆಯ ನಂತರ ಪಕ್ಕಾ ಕಾಂಗ್ರೆಸ್ ಪಕ್ಷದ ಇನ್ನೊಂದು ಮುಖವಾಗಿ ಹೊಮ್ಮಿದೆ.
ಧಿಕ್ಕಾರವಿರಲಿ ಈ ಕನ್ನಡ ದ್ರೋಹಿಗಳಿಗೆ....ಧಿಕ್ಕಾರವಿರಲಿ ಈ ಸರಕಾರಕ್ಕೆ....ಧಿಕ್ಕಾರವಿರಲಿ ಈ ಬಿ.ಜೆ.ಪಿ.ಗೆ.
ಇನ್ನು ಶುರುವಾಗುತ್ತೆ ನೋಡಿ, ಈ ಸರಕಾರ ರೈತರ ಜಮೀನು ಸ್ವಾಧೀನಪಡಿಸಿಕೊಳ್ಳುವುದರ ಜೊತೆಗೆ, ರೈತರಿಗೆ ಸೇರಬೇಕಾದ ನೀರು, ವಿದ್ಯುತ್ ಮುಂತಾದವುಗಳನ್ನು ಕಸಿದುಕೊಂಡು ಕರ್ನಾಟಕ ರಾಜ್ಯದ ರೈತರಿಗೆ ಛಡಿ ಏಟು ನೀಡುತ್ತದೆ. ಈ ಬಿ.ಜೆ.ಪಿ. ಸರಕಾರ ಯಾಕಾದರೂ ಬಂತು ಎಂದು ರೈತರು ಹಣೆ ಹಣೆ ಚಚ್ಚಿಕೊಳ್ಳುತ್ತಿದ್ದಾರೆ. ದೇವರೇ..ಈ ರಾಜ್ಯವನ್ನು ಈ ಬಿ.ಜೆ.ಪಿ. ಎಂಬ ಕನ್ನಡ ವಿರೋಧಿ, ಕರ್ನಾಟಕ ವಿರೋಧಿ ಹಾಗೂ ರೈತ ವಿರೋಧಿ ಸರಕಾರದಿಂದ ಯಾರು ಕಾಪಾಡುತ್ತಾರೋ?. ಸಾಂಸ್ಕೃತಿಕ ಸೂಳೆಗಾರಿಕೆ ನಡೆಸುತ್ತಿರುವ ಐ.ಟಿ ಹಾಗೂ ಬಿ.ಟಿ. ಮಂದಿಯಿಂದ ನಮ್ಮ ರಾಜ್ಯವನ್ನು ರಕ್ಷಿಸುವವರಾರು?. ಕೇವಲ ಉದ್ಯೋಗ ಸೃಷ್ಟಿಯ ನೆಪದಿಂದ ರೈತರನ್ನು ದಮನಿಸುವ ಕೆಲಸ ಈ ಸರಕಾರ ಅಚ್ಚುಕಟ್ಟಾಗಿ ಮಾಡುತ್ತಿದೆ. ಆ ಉದ್ಯೋಗದಲ್ಲಿ ಕನ್ನಡಿಗರ ಪಾಲು ಖಂಡಿತಾ ನಗಣ್ಯ. ಏಕೆಂದರೆ ಈ ಕನ್ನಡ ವಿರೋಧಿ, ದರಿದ್ರ ಕರ್ನಾಟಕ ಸರಕಾರ ಭಾಷಾ ಅಲ್ಪಸಂಖ್ಯಾತರಿಗೆ ಮಣೆ ಹಾಕಿ ತಾನು ಮಾತ್ರ ಈ ದೇಶವನ್ನು ಪ್ರೀತಿಸುವ ಜಾತ್ಯಾತೀತ ಪಕ್ಷ ಎಂಬುದನ್ನು ಈ ಜಗತ್ತಿಗೆ ತೋರಿಸುವ ಒಂದು ನೀಚ ಕೆಲಸ ಮಾಡುತ್ತಿದೆ.
ಈ ಯಡಿಯೂರಪ್ಪ ಈಗ ರೆಡ್ಡಿ ಸಹೋದರರ ಕೃಪಾಕಟಾಕ್ಷದಿಂದ ತಾನು ಕೂಡಾ ರಾಜ್ಯವನ್ನು ಲೂಟಿ ಮಾಡುವತ್ತ ಒಂದು ಹೆಜ್ಜೆ ಮುಂದೆ ಹೋಗಿದ್ದಾನೆ. ಈ ಬಿ.ಜೆ.ಪಿ. ಗೂಂಡಾಗಳಿಗೆ ಜನ ಸರಿಯಾದ ಪಾಠ ಕಲಿಸದಿದ್ದರೆ, ಮುಂದೆ ಕರ್ನಾಟಕದಲ್ಲಿ ಕನ್ನಡಿಗರೇ ಇಲ್ಲದಂತಾಗುತ್ತದೆ. ಕಾಶ್ಮೀರದಲ್ಲಿ ಹೇಗೆ ಹಿಂದೂಗಳು ಇಲ್ಲವೋ, ಅದೇ ರೀತಿ ಕರ್ನಾಟಕದಲ್ಲಿ ಕನ್ನಡಿಗರೂ ಬದುಕುವುದು ಕಷ್ಟವಾಗುತ್ತದೆ. ಬಿ.ಬಿ.ಎಂ.ಪಿ. ಚುನಾವಣೆಯಲ್ಲಿ ಹಣ ಹೆಂಡ ಹಂಚಿ ಕಾಂಗ್ರೆಸ್ ಸಂಸ್ಕೃತಿಯನ್ನು ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಅಳವಡಿಸಿಕೊಂಡು ಚುನಾವಣೆಯ ನಂತರ ಪಕ್ಕಾ ಕಾಂಗ್ರೆಸ್ ಪಕ್ಷದ ಇನ್ನೊಂದು ಮುಖವಾಗಿ ಹೊಮ್ಮಿದೆ.
ಧಿಕ್ಕಾರವಿರಲಿ ಈ ಕನ್ನಡ ದ್ರೋಹಿಗಳಿಗೆ....ಧಿಕ್ಕಾರವಿರಲಿ ಈ ಸರಕಾರಕ್ಕೆ....ಧಿಕ್ಕಾರವಿರಲಿ ಈ ಬಿ.ಜೆ.ಪಿ.ಗೆ.
Subscribe to:
Posts (Atom)