Sunday, October 31, 2010

ಪ್ರಾರ್ಥನಾ ಶಾಲೆ ಮತ್ತು ಟ್ರಾಫಿಕ್ ಕಿರಿಕ್ಕು






ಬೆಂಗಳೂರಿನ ಪದ್ಮನಾಭನಗರದ ಹತ್ತಿರ ಇರುವ ಪ್ರಾರ್ಥನಾ ಶಾಲೆಯಿಂದ ಸಾರ್ವಜನಿಕರಿಗೆ ಆ ರಸ್ತೆಯಲ್ಲಿ ಓಡಾಡಲೂ ಆಗದ ದುಸ್ತರ ಪರಿಸ್ಥಿತಿ ಎದುರಾಗಿದೆ. ಆ ಶಾಲೆಗೆ ಬರುವ ಪ್ರತೀ ಒಬ್ಬ ಮಗುವಿಗೆ ಒಂದು ಕಾರು ಆ ರಸ್ತೆಯಲ್ಲಿ ಓಡಾಡುವುದರಿಂದ ದಿನ ನಿತ್ಯ ಅಲ್ಲಿ ಸಾರ್ವಜನಿಕ ವಾಹನಗಳು, ದ್ವಿಚಕ್ರ ವಾಹನಗಳು ಓಡಾಡಲು ಅಲ್ಲದೆ ನಡೆದುಕೊಂಡು ಹೋಗಲೂ ಸಹ ಕಷ್ಟಕರ ಪರಿಸ್ಥಿತಿ ನಿರ್ಮಾಣವಾಗಿದೆ.
ಅಲ್ಲಿನ ಸಂಚಾರಿ ಪೋಲಿಸರಿಗೂ ದಿನ ನಿತ್ಯ ಕಿರಿಕಿರಿ. ಅಲ್ಲದೆ ಉತ್ತರಹಳ್ಳಿಯಿಂದ ಕುಮಾರಸ್ವಾಮಿ ಬಡಾವಣೆಗೆ ಹೋಗಲು ಬಲಕ್ಕೆ ತಿರುಗುವ ಅವಕಾಶವಿಲ್ಲ. ಅದರೆ ಈ ಸಂಚಾರಿ ನಾಮಫಲಕದ ಮುಂಭಾಗವೇ ರಾಜಕೀಯ ಪಕ್ಷದ ಬ್ಯಾನರ್ ರಾರಾಜಿಸುತ್ತಿದೆ. ಇದರಿಂದ ಈ ನಾಮಫಲಕ ಕಾಣಿಸದಿರುವುದರಿಂದ ಅನೇಕರು ಬಲಕ್ಕೆ ತಿರುಗಿಸಲು ಹೋಗಿ, ಸುಮ್ಮನೇ ದಂಡ ಕಟ್ಟುವ ಪರಿಸ್ಥಿತಿ ನಿರ್ಮಾಣವಾಗಿದೆ. ಅಲ್ಲದೆ ಆ ಶಾಲೆಯ ಮಕ್ಕಳೂ ಕೂಡಾ ತಾವು ಅಭದ್ರತೆಯಿಂದ ಓಡಾಡುವಂತಾಗಿದೆ. ಇಲ್ಲಿ ಓಡಾಡುವ ವಾಹನಗಳಿಂದ ರಸ್ತೆ ದಾಟಲೂ ಆಗದ ಪರಿಸ್ಥಿತಿ ನಿರ್ಮಾಣವಾಗಿದೆ.
ಅಲ್ಲಿನ ದಾರಿಹೋಕರಿಗೆ ಹಾಗೂ ಸಾರ್ವಜನಿಕ ವಾಹನಗಳಿಗೆ ಒಡಾಡಲು ದುಸ್ತರವಾಗುವಂತೆ ಮಾಡಿದ ಈ ಪ್ರಾರ್ಥನಾ ಶಾಲೆಯನ್ನು ಆ ಜಾಗದಿಂದ ಎತ್ತಂಗಡಿ ಮಾಡಿಸದಿದ್ದರೆ ಮುಂದೆ ಆ ರಸ್ತೆಯಲ್ಲಿ ಖಂಡಿತಾ ಓಡಾಡಲು ಸಾದ್ಯವೇ ಇಲ್ಲದ ಪರಿಸ್ಥಿತಿ ನಿರ್ಮಾಣವಾಗುವುದರಲ್ಲಿ ಸಂಶಯವಿಲ್ಲ. ದಯವಿಟ್ಟು ಅಲ್ಲಿನ ಜನನಾಯಕರು ಸಾರ್ವಜನಿಕ ಹಿತಾಸಕ್ತಿ ಕಾಯಿದೆಯ ಅನುಸಾರ ಆ ಶಾಲೆಯ ಮೇಲೆ ಕಠಿನ ಕ್ರಮ ತೆಗೆದುಕೊಳ್ಳಬೇಕಾಗಿದೆ.

1 comment:

Anonymous said...

Rowdy sheeter's school can not be removed since he is having more power than govt.