Showing posts with label Bengaluru. Show all posts
Showing posts with label Bengaluru. Show all posts

Sunday, October 31, 2010

ಪ್ರಾರ್ಥನಾ ಶಾಲೆ ಮತ್ತು ಟ್ರಾಫಿಕ್ ಕಿರಿಕ್ಕು






ಬೆಂಗಳೂರಿನ ಪದ್ಮನಾಭನಗರದ ಹತ್ತಿರ ಇರುವ ಪ್ರಾರ್ಥನಾ ಶಾಲೆಯಿಂದ ಸಾರ್ವಜನಿಕರಿಗೆ ಆ ರಸ್ತೆಯಲ್ಲಿ ಓಡಾಡಲೂ ಆಗದ ದುಸ್ತರ ಪರಿಸ್ಥಿತಿ ಎದುರಾಗಿದೆ. ಆ ಶಾಲೆಗೆ ಬರುವ ಪ್ರತೀ ಒಬ್ಬ ಮಗುವಿಗೆ ಒಂದು ಕಾರು ಆ ರಸ್ತೆಯಲ್ಲಿ ಓಡಾಡುವುದರಿಂದ ದಿನ ನಿತ್ಯ ಅಲ್ಲಿ ಸಾರ್ವಜನಿಕ ವಾಹನಗಳು, ದ್ವಿಚಕ್ರ ವಾಹನಗಳು ಓಡಾಡಲು ಅಲ್ಲದೆ ನಡೆದುಕೊಂಡು ಹೋಗಲೂ ಸಹ ಕಷ್ಟಕರ ಪರಿಸ್ಥಿತಿ ನಿರ್ಮಾಣವಾಗಿದೆ.
ಅಲ್ಲಿನ ಸಂಚಾರಿ ಪೋಲಿಸರಿಗೂ ದಿನ ನಿತ್ಯ ಕಿರಿಕಿರಿ. ಅಲ್ಲದೆ ಉತ್ತರಹಳ್ಳಿಯಿಂದ ಕುಮಾರಸ್ವಾಮಿ ಬಡಾವಣೆಗೆ ಹೋಗಲು ಬಲಕ್ಕೆ ತಿರುಗುವ ಅವಕಾಶವಿಲ್ಲ. ಅದರೆ ಈ ಸಂಚಾರಿ ನಾಮಫಲಕದ ಮುಂಭಾಗವೇ ರಾಜಕೀಯ ಪಕ್ಷದ ಬ್ಯಾನರ್ ರಾರಾಜಿಸುತ್ತಿದೆ. ಇದರಿಂದ ಈ ನಾಮಫಲಕ ಕಾಣಿಸದಿರುವುದರಿಂದ ಅನೇಕರು ಬಲಕ್ಕೆ ತಿರುಗಿಸಲು ಹೋಗಿ, ಸುಮ್ಮನೇ ದಂಡ ಕಟ್ಟುವ ಪರಿಸ್ಥಿತಿ ನಿರ್ಮಾಣವಾಗಿದೆ. ಅಲ್ಲದೆ ಆ ಶಾಲೆಯ ಮಕ್ಕಳೂ ಕೂಡಾ ತಾವು ಅಭದ್ರತೆಯಿಂದ ಓಡಾಡುವಂತಾಗಿದೆ. ಇಲ್ಲಿ ಓಡಾಡುವ ವಾಹನಗಳಿಂದ ರಸ್ತೆ ದಾಟಲೂ ಆಗದ ಪರಿಸ್ಥಿತಿ ನಿರ್ಮಾಣವಾಗಿದೆ.
ಅಲ್ಲಿನ ದಾರಿಹೋಕರಿಗೆ ಹಾಗೂ ಸಾರ್ವಜನಿಕ ವಾಹನಗಳಿಗೆ ಒಡಾಡಲು ದುಸ್ತರವಾಗುವಂತೆ ಮಾಡಿದ ಈ ಪ್ರಾರ್ಥನಾ ಶಾಲೆಯನ್ನು ಆ ಜಾಗದಿಂದ ಎತ್ತಂಗಡಿ ಮಾಡಿಸದಿದ್ದರೆ ಮುಂದೆ ಆ ರಸ್ತೆಯಲ್ಲಿ ಖಂಡಿತಾ ಓಡಾಡಲು ಸಾದ್ಯವೇ ಇಲ್ಲದ ಪರಿಸ್ಥಿತಿ ನಿರ್ಮಾಣವಾಗುವುದರಲ್ಲಿ ಸಂಶಯವಿಲ್ಲ. ದಯವಿಟ್ಟು ಅಲ್ಲಿನ ಜನನಾಯಕರು ಸಾರ್ವಜನಿಕ ಹಿತಾಸಕ್ತಿ ಕಾಯಿದೆಯ ಅನುಸಾರ ಆ ಶಾಲೆಯ ಮೇಲೆ ಕಠಿನ ಕ್ರಮ ತೆಗೆದುಕೊಳ್ಳಬೇಕಾಗಿದೆ.

Tuesday, March 16, 2010

ಬಿ.ಬಿ.ಎಂ.ಪಿ ಚುನಾವಣೆಯಲ್ಲಿ ಕನ್ನಡಿಗರನ್ನು ಗೆಲ್ಲಿಸಿ

ಸದ್ಯದಲ್ಲೇ ಬಿ.ಬಿ.ಎಂ.ಪಿ ಚುನಾವಣೆ ಹತ್ತಿರ ಬರುತ್ತಿದೆ. ನಮ್ಮ ಕನ್ನಡಿಗರೆಲ್ಲಾ ಈಗ ಒಗ್ಗಟ್ಟಾಗಿ ಈ ಚುನಾವಣೆಯನ್ನು ಯಶಸ್ವಿಯಾಗಿ ಎದುರಿಸಿ, ಕೇವಲ ಕನ್ನಡಿಗ ಅಭ್ಯರ್ಥಿಗಳನ್ನು ಚುನಾಯಿಸಬೇಕಾಗಿದೆ. ಏಕೆಂದರೆ ತಮಿಳುನಾಡಿನ ಕೆಲ ರಾಜ್ಯವಿರೋಧಿ ಶಕ್ತಿಗಳು (ಎ.ಐ.ಡಿ.ಎಂ.ಕೆ ಮತ್ತು ಡಿ.ಎಂ.ಕೆ) ಕೂಡಾ ಈ ಚುನಾವಣೆಯಲ್ಲಿ ಭಾಗವಹಿಸುತ್ತಿರುವುದು ಕಳವಳಕಾರಿಯಾಗಿದೆ. ತಮಿಳರು ಈಗ ನಗರಪಾಲಿಕೆಯಲ್ಲಿ ತಮ್ಮ ಇರವನ್ನು ತೋರ್ಪಡಿಸಿ, ಕನ್ನಡಿಗರನ್ನು ತುಳಿಯಲು ಹುನ್ನಾರ ನಡೆಸಿದ್ದಾರೆ.

ಕನ್ನಡಿಗರೇ ಎದ್ದೇಳಿ, ಕೇವಲ ಕನ್ನಡಿಗರನ್ನೇ ಆರಿಸಿ, ಅವರು ಯಾವ ಪಕ್ಷದ ಅಭ್ಯರ್ಥಿಯಾಗಿದ್ದರೂ ಸರಿ....ಆದರೆ ಯಾವುದೇ ಒಬ್ಬ ತಮಿಳ ಯಾವುದೇ ಪಕ್ಷದಿಂದ ಸ್ಪರ್ಧಿಸಿದ್ದರೆ ಅವನು ಎಷ್ಟೇ ಒಳ್ಳೆಯವನಾದರೂ ದಯವಿಟ್ಟು ಅವನನ್ನು ಚುನಾಯಿಸಬೇಡಿ. ಇದು ನಮ್ಮ ಕನ್ನಡಿಗರ ಸ್ವಾಭಿಮಾನದ ಪ್ರಶ್ನೆ. ಏಕೆಂದರೆ ಈ ತಮಿಳರು ಕನ್ನಡಿಗರ ಸ್ವಾಭಿಮಾನವನ್ನು ಕೆಣಕುತ್ತಿದ್ದಾರೆ. ಬೆಂಗಳೂರಿನಲ್ಲಿ ಕನ್ನಡಿಗರ ಇರುವಿಕೆಯನ್ನೇ ಪ್ರಶ್ನಿಸಿ ಬೆಂಗಳೂರಿನ ಕೆಲ ತಮಿಳು ಉಗ್ರವಾದಿ ಸಂಘಟನೆಗಳು ತಮ್ಮ ಅಂತರ್ಜಾಲ ಪುಟದಲ್ಲಿ ಲೇಖನಗಳನ್ನು ಬರೆದಿರುವುದು ಆತಂಕಕಾರಿಯಾಗಿದೆ. ಇದರ ವಿರುದ್ದ ನಮ್ಮ ಘನ ಸರಕಾರ ಕೂಡಾ ಚಕಾರ ಎತ್ತದಿರುವುದು ಕಳವಳಕಾರಿಯಾಗಿದೆ.
ಕೇವಲ ಪುಟಗೋಸಿ ತಮಿಳರ ಓಟಿಗೆ ಆಸೆಪಟ್ಟು ಇವತ್ತು ಭಾರತೀಯ ಜನತಾ ಪಕ್ಷದ ಕೆಲ ಮುಖಂಡರು ಅವರನ್ನು ಓಲೈಸುವ ಮಟ್ಟಕ್ಕೆ ಇಳಿದಿರುವುದು ಕನ್ನಡಿಗರಾದ ನಮಗೆ ಆತಂಕಕಾರಿ ವಿಷಯ.

ದಯವಿಟ್ಟು ಕನ್ನಡಿಗ ಅಭ್ಯರ್ಥಿಗಳನ್ನು ಗೆಲ್ಲಿಸಿ.....ಬೆಂಗಳೂರು ಉಳಿಸಿ....