Sunday, April 04, 2010

ದೇಶದ್ರೋಹಿ ಬಾಳ ಥಾಕ್ರೆ ಮತ್ತು ಭಯೋತ್ಪಾದಕ ಸಂಘಟನೆಗಳು

ಇತ್ತೀಚೆಗೆ ಬಾಳಥಾಕ್ರೆ ಎಂಬ ದೇಶದ್ರೋಹಿ (ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುತ್ತಿರುವ) ಬಹಳ ನಿಗುರುತ್ತಿದ್ದಾನೆ. ಎಲ್ಲರೂ ರಾಜ್ಯ ರಾಜಕಾರಣದಿಂದ ರಾಷ್ಟ್ರ ರಾಜಕಾರಣಕ್ಕೆ ಬಂದರೆ ಇವನದ್ದು ಉಲ್ಟಾ ಕೇಸು, ರಾಷ್ಟ್ರ ರಾಜಕಾರಣದಿಂದ ರಾಜ್ಯರಾಜಕಾರಣಕ್ಕೆ ಬರುತ್ತಿದ್ದಾನೆ. ಇವನ ಸಂಕುಚಿತ ಮನಸ್ಸು ಕರ್ನಾಟಕ ಮತ್ತು ಮಹಾರಾಷ್ಟ್ರದ ಜನರ ಭಾವನೆಗಳಿಗೆ ಧಕ್ಕೆ ತರುತ್ತಿರುವುದು ಸತ್ಯ.
ಇತ್ತೀಚೆಗೆ ತನ್ನ ದೇಶವಿರೋಧಿ ಪತ್ರಿಕೆ ’ಸಾಮ್ನಾ’ ದಲ್ಲಿ ಕರ್ನಾಟಕದ ಮುಖ್ಯಮಂತ್ರಿಯನ್ನು ಹುಚ್ಚ ಎಂದು ಸಂಬೋಧಿಸಿರುವುದು ಇವನ ಮೆದುಳಿನಲ್ಲಿ ತುಂಬಿರುವುದು ಸೆಗಣಿ ಏಮ್ಬುದನ್ನು ಸಾಬೀತುಪಡಿಸುತ್ತದೆ. ಇಂತಹಾ ಲುಚ್ಚಾಗಳನ್ನು ಈ ದೇಶದಿಂದಲೇ ಒದ್ದು ಹೊರಗೋಡಿಸದಿದ್ದಲ್ಲಿ ನಮ್ಮ ಭಾರತದ ಒಕ್ಕೂಟ ವ್ಯವಸ್ಥೆಗೆ ಅಪಾಯ. ಒಬ್ಬ ನಾಮರ್ದ ಮುಂಬೈನಲ್ಲಿ ಕೂತು ಬಾಯಿಗೆ ಬಂದಂತೆ ಮಾತನಾಡುತ್ತಿರುವುದು ಅವನ ಜನ್ಮಕ್ಕೇ ಕಳಂಕ. ಅವನಿಗೆ ತಾಕತ್ತಿದ್ದರೆ ಬೆಂಗಳೂರಿಗೆ ಬಂದು ಅದೇ ರೀತಿಯ ಹೇಳಿಕೆ ಕೊಡಲಿ, ಕನ್ನಡಿಗರು ದೇಶದ್ರೋಹಿಗಳಿಗೆ ಯಾವ ರೀತಿಯ ಉತ್ತರ ಕೊಡುತ್ತಾರೆ ಎಂಬುದನ್ನು ಅವನು ತನ್ನ ಮುಂದಿನ ನಾರಾರು ಜನ್ಮಕ್ಕೆ ಅರಿತುಕೊಳ್ಳಬೇಕು.
ತನ್ನ ಕುಟುಂಬವನ್ನೇ ಸರಿಯಾದ ಹಾದಿಯಲ್ಲಿ ನಡೆಸಲು ಸಾಧ್ಯವಿಲ್ಲದ ಈ ಶಿಖಂಡಿ, ಕರ್ನಾಟಕದ ಅವಿಭಾಜ್ಯ ಅಂಗವಾದ ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸುವ ಹಗಲುಗನಸು ಕಾಣುತ್ತಿದ್ದಾನೆ. ಅದಕ್ಕಾಗಿ ಅವನು ತನ್ನ ಭಯೋತ್ಪಾದಕ ಸಂಘಟನೆಗಳಾದ ಶಿವಸೇನೆ, ಎಂ.ಇ.ಎಸ್.ಗಳನ್ನು ಕನ್ನಡಿಗರ ಮೇಲೆ ದೌರ್ಜನ್ಯ ನಡೆಸಲು ಛೂ ಬಿಟ್ಟಿದ್ದಾನೆ. ಕಾಶ್ಮೀರ ವಿಷಯದಲ್ಲಿ ಹೇಗೆ ಪಾಕಿಸ್ತಾನ ಮೂಗು ತೂರಿಸುತ್ತದೋ ಅದೇ ರೀತಿ ಬೆಳಗಾವಿ ವಿಷಯದಲ್ಲಿ ಕಾಶ್ಮೀರಿ ಭಯೋತ್ಪಾದಕನಂತೆ ವರ್ತಿಸುತ್ತಿರುವುದು ನಮ್ಮ ದೇಶದ ದುರಂತ ಸಂಗತಿ. ಇದಕ್ಕಾಗಿ ಇವನನ್ನು ಬಂಧಿಸಿ ಜೈಲಿಗೆ ತಳ್ಳುವುದನ್ನು ಬಿಟ್ಟು ಮತ್ತಷ್ಟು ಬೊಗಳಲು ಅವಕಾಶ ಮಾಡಿಕೊಡುತ್ತಿರುವುದು ಮಹಾರಾಷ್ಟ್ರ ಸರಕಾರದ ದೊಡ್ಡ ತಪ್ಪು.
ಇಂತಹ ದೇಶದ್ರೋಹಿಗಳಿಗೆ ಮೆಟ್ಟಲ್ಲಿ ಹೊಡೆದು, ಸಾರ್ವಜನಿಕವಾಗಿ ಕತ್ತೆಯ ಮೇಲೆ ಕೂರಿಸಿ ಮೆರವಣಿಗೆ ಮಾಡಿ ನೇಣಿಗೆ ಹಾಕಬೇಕು. ನಮ್ಮೊಳಗೇ ಭಯೋತ್ಪಾದಕ ಸಂಘಟನೆಗಳನ್ನಿಟ್ಟುಕೊಂಡು ಪಾಕಿಸ್ತಾನೀಯರಿಗೆ ಬುದ್ದಿ ಹೇಳಲು ನಮ್ಮ ಸರಕಾರಕ್ಕೆ ನಾಚಿಕೆಯಾಗಬೇಕು. ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುತ್ತಿರುವ ಈ ಕೆಳಗಿನ ಸಂಘಟನೆಗಳನ್ನು ನಿಷೇಧಿಸಿ ಆ ಸಂಘಟನೆಗಳ ಮುಖ್ಯಸ್ಥರನ್ನು ನೇಣಿಗೆ ಹಾಕಿ ಭಯೋತ್ಪಾದಕತೆಯ ಮೂಲೋಚ್ಚಾಟನೆಗೆ ಕಟಿಬದ್ದರಾಗಿ.
೧. ಶಿವಸೇನೆ.
೨. ಎಂ.ಇ.ಎಸ್.
೩. ನಕ್ಸಲೀಯರು
೪. ಡಿ.ಎಂ.ಕೆ.
೫. ಎ.ಐ.ಡಿ.ಎಂ.ಕೆ.
೬. ಪಿ.ಎಂ.ಕೆ.
೭. ಎಲ್.ಟಿ.ಟಿ.ಇ.
೮. ಕೇರಳದ ಎಲ್.ಡಿ.ಎಫ್.

ಇನ್ನೂ ಹಲವು ಸಂಘಟನೆಗಳು ದಕ್ಷಿಣ ಭಾರತದಲ್ಲಿ ಕಾರ್ಯನಿರತವಾಗಿದ್ದು, ಅವುಗಳು ಬೆಳೆಯುವ ಮೊದಲೇ ಚಿವುಟಿ ಹಾಕಿ, ಇಲ್ಲ ಅವುಗಳು ಈ ದೇಶವನ್ನೇ ಬಲಿತೆಗೆದುಕೊಳ್ಳುವುದರಲ್ಲಿ ಸಂಶಯವಿಲ್ಲ.

Monday, March 29, 2010

ಮತದಾನ ಕಡ್ಡಾಯ ಮಾಡಿ

ಇತ್ತೀಚೆಗೆ ನಡೆದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಮತದಾನ ಮಾಡಲು ನಿರುತ್ಸಾಹ ತೋರಿದ ಬೆಂಗಳೂರಿನ ಮತದಾರ ತಾನು ಒಬ್ಬ ಶತ ಮೂರ್ಖ ಎಂಬುದನ್ನು ತೋರಿಸಿಕೊಟ್ಟಿದ್ದಾನೆ. ಮತದಾನ ಕಡಿಮೆಯಾದಷ್ಟು ಕಳ್ಳ ಖದೀಮರು ಆಯ್ಕೆಯಾಗುವ ಅವಕಾಶ ಜಾಸ್ತಿ. ಆದ್ದರಿಂದ ಈ ಮತದಾನ ಮಾಡದ ಮೂರ್ಖ ಮಂದಿ ಈ ಕಳ್ಳ ಖದೀಮರ ಆಯ್ಕೆಗೆ ಪರೋಕ್ಷವಾಗಿ ಸಹಕಾರ ನೀಡಿದ್ದಾರೆ.

ಇದಕ್ಕೆಲ್ಲ ಒಂದೇ ಪರಿಹಾರ ಎಂದರೆ ಮತದಾನ ಕಡ್ಡಾಯ ಮಾಡುವುದು. ಮತದಾನ ಮಾಡದ ಈ ಸೋಂಬೇರಿಗಳಿಗೆ ಮತದಾನದ ಮಹತ್ವ ಗೊತ್ತಿಲ್ಲದಿರುವುದು ಈ ದೇಶದ ದುರಂತ. ಬೆಂಗಳೂರಿನಲ್ಲಿ ಅನಕ್ಷರತೆ ಇನ್ನೂ ಪ್ರತಿಶತ ೫೦ರಷ್ಟು ಇದೆ ಎಂಬುದನ್ನು ಇದು ತೋರಿಸುತ್ತದೆ. ಈ ಮತದಾನ ಮಾಡದ ಅನಕ್ಷರಸ್ಥ (?) ಮಂದಿಗೆ ಬೆಂಗಳೂರಿನಲ್ಲೂ ಸಂಜೆ ತರಗತಿಗಳನ್ನು ನಡೆಸಿ, ಅಕ್ಷರಾಭ್ಯಾಸ ಮಾಡಿಸಿ, ಈ ಮತದಾನದ ಬಗ್ಗೆ ಅವರಿಗೆ ತಿಳಿಸಿ ಹೇಳುವ ಅಗತ್ಯತೆ ಇವತ್ತು ಖಂಡಿತಾ ಇದೆ ಎಂಬುದು ನನ್ನ ಅಭಿಮತ.

ಈ ಮತದಾನವನ್ನು ಕಡ್ಡಾಯ ಮಾಡುವುದು ಇದಕ್ಕೆಲ್ಲಾ ಒಂದು ಪರಿಹಾರ. ಮತದಾನ ಮಾಡದ ಮಂದಿಯ ಮೇಲೆ ನಿರ್ದಾಕ್ಷಿಣ್ಯವಾಗಿ ಕಠಿನ ಕ್ರಮ ತೆಗೆದುಕೊಳ್ಳಬೇಕಾದ್ದು ಸರಕಾರದ ಕರ್ತವ್ಯ. ಹೀಗಾದರೂ ಒಬ್ಬ ಒಳ್ಳೆಯ ಅಭ್ಯರ್ಥಿ ಆಯ್ಕೆಯಾಗುವುದು ಸಾಧ್ಯವೋ ಏನೋ?. ಮತದಾನ ಮಾಡದ ಮಂದಿಯ ಮೇಲೆ ಕ್ರಿಮಿನಲ್ ಮೊಕದ್ದಮೆ ಹೂಡುವುದು, ಅವರ ಬ್ಯಾಂಕ್ ಖಾತೆಯನ್ನು ಮುಟ್ಟುಗೋಲು ಹಾಕಿಕೊಳ್ಳುವುದು, ಅವರ ರೇಷನ್ ಕಾರ್ಡ್ ಮುಟ್ಟುಗೋಲು ಹಾಕಿಕೊಳ್ಳುವುದು ಮುಂತಾದ ಕಠಿನ ಕ್ರಮ ತೆಗೆದುಕೊಳ್ಳದಿದ್ದಲ್ಲಿ ಈ ಕತ್ತೆಯ ಮೆದುಳಿನ ಮಂದಿಗೆ ಇದರ ಮಹತ್ವ ತಿಳಿಯುವುದು ಕಷ್ಟ.

Tuesday, March 16, 2010

ಬಿ.ಬಿ.ಎಂ.ಪಿ ಚುನಾವಣೆಯಲ್ಲಿ ಕನ್ನಡಿಗರನ್ನು ಗೆಲ್ಲಿಸಿ

ಸದ್ಯದಲ್ಲೇ ಬಿ.ಬಿ.ಎಂ.ಪಿ ಚುನಾವಣೆ ಹತ್ತಿರ ಬರುತ್ತಿದೆ. ನಮ್ಮ ಕನ್ನಡಿಗರೆಲ್ಲಾ ಈಗ ಒಗ್ಗಟ್ಟಾಗಿ ಈ ಚುನಾವಣೆಯನ್ನು ಯಶಸ್ವಿಯಾಗಿ ಎದುರಿಸಿ, ಕೇವಲ ಕನ್ನಡಿಗ ಅಭ್ಯರ್ಥಿಗಳನ್ನು ಚುನಾಯಿಸಬೇಕಾಗಿದೆ. ಏಕೆಂದರೆ ತಮಿಳುನಾಡಿನ ಕೆಲ ರಾಜ್ಯವಿರೋಧಿ ಶಕ್ತಿಗಳು (ಎ.ಐ.ಡಿ.ಎಂ.ಕೆ ಮತ್ತು ಡಿ.ಎಂ.ಕೆ) ಕೂಡಾ ಈ ಚುನಾವಣೆಯಲ್ಲಿ ಭಾಗವಹಿಸುತ್ತಿರುವುದು ಕಳವಳಕಾರಿಯಾಗಿದೆ. ತಮಿಳರು ಈಗ ನಗರಪಾಲಿಕೆಯಲ್ಲಿ ತಮ್ಮ ಇರವನ್ನು ತೋರ್ಪಡಿಸಿ, ಕನ್ನಡಿಗರನ್ನು ತುಳಿಯಲು ಹುನ್ನಾರ ನಡೆಸಿದ್ದಾರೆ.

ಕನ್ನಡಿಗರೇ ಎದ್ದೇಳಿ, ಕೇವಲ ಕನ್ನಡಿಗರನ್ನೇ ಆರಿಸಿ, ಅವರು ಯಾವ ಪಕ್ಷದ ಅಭ್ಯರ್ಥಿಯಾಗಿದ್ದರೂ ಸರಿ....ಆದರೆ ಯಾವುದೇ ಒಬ್ಬ ತಮಿಳ ಯಾವುದೇ ಪಕ್ಷದಿಂದ ಸ್ಪರ್ಧಿಸಿದ್ದರೆ ಅವನು ಎಷ್ಟೇ ಒಳ್ಳೆಯವನಾದರೂ ದಯವಿಟ್ಟು ಅವನನ್ನು ಚುನಾಯಿಸಬೇಡಿ. ಇದು ನಮ್ಮ ಕನ್ನಡಿಗರ ಸ್ವಾಭಿಮಾನದ ಪ್ರಶ್ನೆ. ಏಕೆಂದರೆ ಈ ತಮಿಳರು ಕನ್ನಡಿಗರ ಸ್ವಾಭಿಮಾನವನ್ನು ಕೆಣಕುತ್ತಿದ್ದಾರೆ. ಬೆಂಗಳೂರಿನಲ್ಲಿ ಕನ್ನಡಿಗರ ಇರುವಿಕೆಯನ್ನೇ ಪ್ರಶ್ನಿಸಿ ಬೆಂಗಳೂರಿನ ಕೆಲ ತಮಿಳು ಉಗ್ರವಾದಿ ಸಂಘಟನೆಗಳು ತಮ್ಮ ಅಂತರ್ಜಾಲ ಪುಟದಲ್ಲಿ ಲೇಖನಗಳನ್ನು ಬರೆದಿರುವುದು ಆತಂಕಕಾರಿಯಾಗಿದೆ. ಇದರ ವಿರುದ್ದ ನಮ್ಮ ಘನ ಸರಕಾರ ಕೂಡಾ ಚಕಾರ ಎತ್ತದಿರುವುದು ಕಳವಳಕಾರಿಯಾಗಿದೆ.
ಕೇವಲ ಪುಟಗೋಸಿ ತಮಿಳರ ಓಟಿಗೆ ಆಸೆಪಟ್ಟು ಇವತ್ತು ಭಾರತೀಯ ಜನತಾ ಪಕ್ಷದ ಕೆಲ ಮುಖಂಡರು ಅವರನ್ನು ಓಲೈಸುವ ಮಟ್ಟಕ್ಕೆ ಇಳಿದಿರುವುದು ಕನ್ನಡಿಗರಾದ ನಮಗೆ ಆತಂಕಕಾರಿ ವಿಷಯ.

ದಯವಿಟ್ಟು ಕನ್ನಡಿಗ ಅಭ್ಯರ್ಥಿಗಳನ್ನು ಗೆಲ್ಲಿಸಿ.....ಬೆಂಗಳೂರು ಉಳಿಸಿ....

Friday, February 12, 2010

ಮುತಾಲಿಕ್ ಮೇಲಿನ ಹಲ್ಲೆ- ಹಿಂದೂ ವಿರೋಧಿಗಳ ಅಟ್ಟಹಾಸ

ಕೆಲ ದಿನಗಳ ಹಿಂದೆ ಮಾನ್ಯ ಪ್ರಮೋದ್ ಮುತಾಲಿಕ್ ಅವರ ಮುಖಕ್ಕೆ ಕೆಲ ಹಿಂದೂ ವಿರೋಧಿಗಳು ಮಸಿ ಬಳಿದು ಕೆಲ ಹಿಂದೂವಿರೋಧಿ ಕುನ್ನಿಗಳು ಭಾರತದ ಸಂಸ್ಕೃತಿಗೆ ಅವಮಾನ ಮಾಡಿದ್ದಾರೆ.

ಕಸ್ತೂರಿ ಚಾನಲ್‌ನಲ್ಲಿ ನಡೆಯುತ್ತಿದ್ದ ಈ ವ್ಯಾ(ಕ್)ಲೈಂಟೈನ್ಸ್ ಡೇ ವಿರುದ್ದ ಹಾಗೂ ಪರ ವಾಕ್ಸಮರದ ಅಂತಿಮ ಘಳಿಗೆಯಲ್ಲಿ ವೇದಿಕೆ ಏರಿ ಬಂದ ಕೆಲ ದುಷ್ಕರ್ಮಿಗಳು (ಇವರ ವಿಚಾರಣೆ ನಡೆಸುವುದೊಳಿತು, ಏಕೆಂದರೆ ಐ.ಎಸ್.ಐಗೆ ಇವರ ಸಂಬಂಧ ಇರಲೂ ಸಾಕು) ಮಾನ್ಯ ಮುತಾಲಿಕ್ ಅವರ ಮುಖಕ್ಕೆ ಮಸಿ ಬಳಿದು ಎಲ್ಲ ಹಿಂದೂಗಳಿಗೆ ಅವಮಾನ ಮಾಡಿದ್ದಾರೆ.

ಅಲ್ಲರೀ...ಮುತಾಲಿಕ್ ಹೇಳುವುದರಲ್ಲಿ ಏನಿದೆ ತಪ್ಪು?. ಮದುವೆಯಾಗದ ಇಬ್ಬರು ಜೋಡಿಗಳು ಪರಸ್ಪರ ಕೈ ಹಿಡಿದುಕೊಂಡು, ಪಾರ್ಕ್‌ನಲ್ಲಿ ಕತ್ತಲಲ್ಲಿ ಪ್ರೀತಿ ಮಾಡುವುದನ್ನು ಈ ದುಷ್ಕರ್ಮಿಗಳು ಹೇಗೆ ಸಮರ್ಥಿಸಿಕೊಳ್ಳುತ್ತಾರೆ?. ಇದು ಖಂಡಿತಾ ಸೂಳೆಗಾರಿಕೆಯ ಇನ್ನೊಂದು ಮುಖ. ಒಬ್ಬ ಹೆಣ್ಣು ಒಬ್ಬ ಗಂಡಸಿಗಿಂತ ಹೆಚ್ಚಿನ ಸಂಬಂಧ ಇಟ್ಟುಕೊಡರೆ ಸಮಾಜದಲ್ಲಿ ಏನು ಹೇಳುತ್ತಾರೆ ಎಂಬುದನ್ನು ಒಬ್ಬ ಸಾಮಾನ್ಯ ಪ್ರಜೆ ಕೂಡಾ ಹೇಳಬಲ್ಲ. ಈಗ ನೀವು ಪ್ರತೀ ಪಾರ್ಕ್‌ನಲ್ಲಿ ಹೋಗಿ ನೋಡಿ, ಪ್ರೀತಿಯ ಹೆಸರಿನಲ್ಲಿ ಲೈಂಗಿಕ ತೀಟೆ ತೀರಿಸಿಕೊಳ್ಳುವುದನ್ನು. ಇದನ್ನು ನಾನು ಕಣ್ಣಾರೆ ನೋಡಿದ್ದೇನೆ. ಜಯನಗರದ ಪಾರ್ಕ್, ಹೆಬ್ಬಾಳದ ಪಾರ್ಕ್, ಬಸವನಗುಡಿಯ ಪಾರ್ಕ್, ಕಬ್ಬನ್ ಪಾರ್ಕ ಮುಂತಾದ ಕಡೆ ಮರ್ಯಾದಸ್ಥರು ಓಡಾದುವುದಕ್ಕೆ ಆಗುತ್ತಾ?. ಈಗ ನಿಜವಾಗಿ ಪ್ರೀತಿಸುವವರು ಎಷ್ಟು ಜನ ಇದ್ದಾರೆ?. ಈ ಪ್ರೀತಿ ಎನ್ನುವುದು ಗಂಡಸಿನ ಕೈಯಲ್ಲಿ ಹಣ ಇರುವ ತನಕ ಮಾತ್ರ, ನಿಮ್ಮ ಕೈಯಲ್ಲಿ ಹಣ, ಕಾರು ಇದ್ದರೆ ಎಂಥಹ ಹೆಣ್ಣು ಕೂಡಾ ಬಾಯಿ ಬಿಡುವ ಕಾಲ. ಅಂದರೆ ಹಣಕ್ಕೆ ಬೆಲೆ ಕೊಡುವ ಕಾಲ.

ಯಾವ ಒಬ್ಬ ಹೆಣ್ಣು ಹೆತ್ತ ತಂದೆ, ತಾಯಿಗಳು ತಮ್ಮ ಮಗಳು ಈ ಥರಾ ಅನ್ಯ ಹುಡುಗನ ಜೊತೆ ಶಾಲೆ-ಕಾಲೆಜ್‌ಗೆ ಚಕ್ಕರ್ ಹೊಡೆದು ಪಾರ್ಕ್‌ನಲ್ಲಿ ಮೋಜು ಮಾಡುವುದನ್ನು ಸಮರ್ಥಿಸಿಕೊಳ್ಳುತ್ತಾರೆ?. ಆದರೆ ಇದನ್ನೆಲ್ಲ ಕಾಮನ್ ಎನ್ನುವ ರೀತಿಯಲ್ಲಿ ನೋಡುವ ಹೆತ್ತವರೂ ಇದ್ದಾರೆ. ಆದರೆ ಅದೇ ಮೋಜು-ಮಸ್ತಿ ತಮ್ಮ ಮಗಳ ಬಾಳನ್ನು ಹಾಳು ಮಾಡಿದಾಗ ಇವರು ಎಚ್ಚೆತ್ತುಕೊಳ್ಳುತ್ತಾರೆ. ಹಾಗಂತ ನಾನು ಈ ಪಡ್ಡೆ ಹುಡುಗರಿಗೆ ಬೆಂಬಲ ನೀಡುತ್ತಿಲ್ಲ. ಬಟ್ಟೆ ಮುಳ್ಳಿನ ಮೇಲೆ ಬಿದ್ದರೂ-ಮುಳ್ಳು ಬಟ್ಟೆಯ ಮೇಲೆ ಬಿದ್ದರೂ ಹರಿಯುವುದು ಬಟ್ಟೆಯೇ. ಆದ್ದರಿಂದ ಈ ನಿಟ್ಟಿನಲ್ಲಿ ಹೆಣ್ಣು ಮಕ್ಕಳು ನಿಜವಾಗಿ ಜಾಗರೂಕರಾಗಿರಬೇಕು.

ಈಗಿನ ಕಾಲೆಜ್ ಜೀವನದಲ್ಲಿ ಈ ಪ್ರೀತಿ ಎನ್ನುವುದು ಫ್ಯಾಶನ್ ಆಗಿಬಿಟ್ಟಿದೆ. ಒಬ್ಬ ಹುಡುಗಿಗೆ-ಒಬ್ಬ ಹುಡುಗ ಜೋಡಿ ಇರಲೇ ಬೇಕು. ಆದರೆ ಇದು ಸಮರ್ಥನೀಯವೇ?. ಭಾರತೀಯ ಸಂಸ್ಕೃತಿಯನ್ನು ರಕ್ಷಿಸಿ ಎನ್ನುವ ಮುತಾಲಿಕ್ ವಾದ ತಪ್ಪೇ?.

Sunday, February 07, 2010

ಕರ್ನಾಟಕದ ಭಯೋತ್ಪಾದಕರು

ಕರ್ನಾಟಕದ ನೆಲದಲ್ಲಿ ಭಯೋತ್ಪಾದಕರ ಹಾವಳಿ ಇತ್ತೀಚೆಗೆ ಜಾಸ್ತಿಯಾಗುತ್ತಿದೆ. ಇದಕ್ಕೆ ಬೆಳಗಾವಿಯಲ್ಲಿ ನಡೆದ ಭಯೋತ್ಪಾದಕ ಸಂಘಟನೆಯಾದ ಎಂ.ಇ.ಎಸ್. ಎಂಬ ತಿಕ್ಕಲು ಸಂಘಟನೆ ನಡೆಸಿದ ಸೀಮಾ ಪರಿಷತ್ ಎನ್ನುವ ಕಾರ್ಯಕ್ರಮವೇ ಸಾಕ್ಷಿ.
ಮುಂಬೈನಲ್ಲಿ ರೌಡಿಯಿಸಂ ಹುಟ್ಟಲು ಕಾರಣವಾದ ಶಿವಸೇನಾ ಎಂಬ ಸಂಘಟನೆಯೇ ಇದಕ್ಕೆ ಕಾರಣ. ಪ್ರಾದೇಶಿಕತೆಯ ಹೆಸರಿನಲ್ಲಿ ದೇಶದೆಲ್ಲೆಡೆ ಭಯೋತ್ಪಾದಕತೆಯನ್ನು ಹಬ್ಬಿಸುತ್ತಿರುವ ಈ ಸಂಘಟನೆಯನ್ನು ಅಲ್ಲಿನ ಕಾಂಗ್ರೆಸ್ ಸರಕಾರ ಯಾಕೆ ನಿಷೇಧಿಸುತ್ತಿಲ್ಲ?. ಮುಂಬೈ ಕೇವಲ ಮಹಾರಾಷ್ಟ್ರಿಗರಿಗೆ ಮಾತ್ರ ಎಂಬ ತಿಕ್ಕಲು ವಾದವನ್ನು ಸಮರ್ಥಿಸಿಕೊಳ್ಳುತ್ತಿರುವ ಈ ಸಂಘಟನೆ ಶಿವಾಜಿಯ ಹೆಸರಿಗೆ ಮಸಿ ಬಳಿಯುವ ಕೆಲಸ ಮಾಡುತ್ತಿದೆ. ಉತ್ತರಭಾರತೀಯರನ್ನು ಮುಂಬೈನಿಂದ ಹೊರಗಟ್ಟುವಂತೆ ಕರೆ ನೀಡಿದ ಈ ಭಯೋತ್ಪಾದಕ ಸಂಘಟನೆಗೂ ಕಾಶ್ಮೀರದಲ್ಲಿ ಭಯೋತ್ಪಾದಕತೆಯನ್ನು ಸೃಷ್ಟಿಸುತ್ತಿರುವ ಮುಸ್ಲಿಂ ಭಯೋತ್ಪಾದಕರಿಗೂ ಯಾವ ವ್ಯತ್ಯಾಸವೂ ಇಲ್ಲ. ಏಕೆಂದರೆ ಈ ಎರಡೂ ಸಂಘಟನೆಗಳು ದೇಶವನ್ನು ಛಿದ್ರಮಾಡುವತ್ತ ತಮ್ಮ ಗುರಿ ಹೊಂದಿವೆ.
ಅದರಲ್ಲೂ ಬೆಳಗಾವಿಯ ಎಂ.ಇ.ಎಸ್. ಎಂಬ ಭಯೋತ್ಪಾದಕ ಸಂಘಟನೆಯಂತೂ ಕರ್ನಾಟಕದ ಅನ್ನ ತಿಂದು, ಇಲ್ಲಿನ ನೀರು ಕುಡಿದು, ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕೆಂಬ ಹುಂಬ ವಾದವನ್ನು ಮಂಡಿಸಿ ತನ್ನ ದೇಶದ್ರೋಹಿತನವನ್ನು ತೋರಿಸಿದೆ. ಈ ಸೀಮಾ ಪರಿಷತ್ ಕಾರ್ಯಕ್ರಮಕ್ಕೆ ಅನುಮತಿ ಕೊಟ್ಟು ನಮ್ಮ ಕರ್ನಾಟಕದ ಮಾನ್ಯ ಮುಖ್ಯಮಂತ್ರಿಗಳಾದ ಯಡಿಯೂರಪ್ಪನವರು ತನ್ನ ಕನ್ನಡದ್ರೋಹಿತನವನ್ನು, ಕರ್ನಾಟಕ ವಿರೋಧಿ ನೀತಿಯನ್ನು ಸಮರ್ಥಿಸಿಕೊಂಡಿದ್ದಾರೆ. ಈ ಕರ್ನಾಟಕ ದ್ರೋಹಿ ಕಾರ್ಯಕ್ರಮದಲ್ಲಿ ಕನ್ನಡಿಗರಿಗೆ ಅಲ್ಲಿನ ಮರಾಠಿ ಪುಂಡರು ಥಳಿಸಿದಾಗಲೂ ತುಟಿ ಪಿಟಿಕ್ ಎನ್ನದ ಈ ಮುಖ್ಯಮಂತ್ರಿಗಳು ಮರಾಠಿ ಪುಂಡರಿಗೆ ಹೆದರಿ ಬಚ್ಚಿಟ್ಟುಕೊಂಡದ್ದು ನಮ್ಮ ದುರ್ದೈವ.
ಇದನ್ನು ಹೀಗೆಯೇ ಬಿಟ್ಟರೆ ಮುಂದೆ ಅಖಂಡ ಕರ್ನಾಟಕವು ಛಿದ್ರ ಛಿದ್ರವಾಗುವುದರಲ್ಲಿ ಸಂಶಯವಿಲ್ಲ. ನಮ್ಮ ಕರ್ನಾಟಕದ ಅತ್ಯಂತ ಬಲಹೀನ, ದುರ್ಬಲ ಮುಖ್ಯಮಂತ್ರಿಗೆ ಈ ಬಗ್ಗೆ ಕಾಳಜಿಯಿಲ್ಲದಿರುವುದು ಕರ್ನಾಟಕದ ದುರ್ದೈವ. ಕೇವಲ ಗಣಿಧಣಿಗಳ ಪಾದ ಪೂಜೆ ಮಾಡುವುದರಲ್ಲೇ ಕಾಲಹರಣ ಮಾಡುತ್ತಿರುವ ಯಡಿಯೂರಪ್ಪನವರಿಗೆ ಕರ್ನಾಟಕದ ಬಗ್ಗೆ ಕಾಳಜಿ ಇಲ್ಲದೆ ಕೇವಲ ತನ್ನ ಹೊಟ್ಟೆ ತುಂಬಿಸಿಕೊಳ್ಳುವುದರಲ್ಲೇ ಕಾಲ ಹರಣಮಾಡುತ್ತಿರುವುದು ಸೋಜಿಗ.
ಈ ಮರಾಠಿ ಭಯೋತ್ಪಾದಕರನ್ನ ನಿರ್ದಾಕ್ಷಿಣ್ಯವಾಗಿ ಮಟ್ಟಹಾಕದಿದ್ದಲ್ಲಿ, ಈವರೆಗೆ ದಕ್ಷಿಣದಲ್ಲಿ ಇರದ ಭಯೋತ್ಪಾದಕತೆ ತಲೆ ಎತ್ತುವುದರಲ್ಲಿ ಸಂಶಯವಿಲ್ಲ.

Saturday, October 31, 2009

ಬೆಂಗಳೂರಿನಲ್ಲಿ ತಮಿಳರ ತಿಕ್ಕಲುತನ

ಎಲ್ಲ ಕನ್ನಡಿಗರಿಗೆ ಇದು ಎಚ್ಚರಿಕೆ ಗಂಟೆ. ಈ ಬೆಂಗಳೂರಿನ ತಮಿಳುಸಂಘ ಎನ್ನುವ ಕರ್ನಾಟಕ ವಿರೋಧಿ ಸಂಘಟನೆ, ಈ ದೇಶದ ಸಂವಿಧಾನಕ್ಕೇ ಮಸಿ ಬಳಿಯುವ ಹುನ್ನಾರ ನಡೆಸಿದೆ. ಇಲ್ಲಿ ಕರ್ನಾಟಕವನ್ನು ತಮಿಳುನಾಡು ಮಾಡಲು ಹೊರಟಿದೆ. ಎಚ್ಚರಿಕೆ ಕನ್ನಡಿಗರೇ!!!!! ಮುಸಲ್ಮಾನರು ಜಿಹಾದ್ ಎಂಬ ಅಸ್ತ್ರದಿಂದ ಪ್ರಪಂಚ ನಾಶ ಮಾಡಲು ಹೊರಟರೆ ಈ ತಮಿಳರು, ತಮಿಳು ಅಸ್ತ್ರ ಹಿಡಿದು ಹೋದಲ್ಲೆಲ್ಲಾ ತಮ್ಮ ದೇಶವಿರೋಧಿ ನೀತಿಯನ್ನು ಪ್ರಚುರಪಡಿಸುತ್ತಿದ್ದಾರೆ. ರಾಷ್ಟ್ರ ಭಾಷೆಯನ್ನು ತಮಿಳುನಾಡಿನಲ್ಲಿ ನಿಷೇಧಿಸಿ ತಮ್ಮ ದೇಶಪ್ರೇಮವನ್ನು ಇವರು ಪ್ರಪಂಚಕ್ಕೇ ತೋರಿಸಿಕೊಟ್ಟಿದ್ದಾರೆ.
ಈ ಲಿಂಕ್ ನಲ್ಲಿರುವ ಕೆಲ ಅಂಶಗಳನ್ನು ನೋಡಿ:
http://www.tamilnation.org/diaspora/karnataka.htm

ಇದರ ಪ್ರಕಾರ:
೧. ಬೆಂಗಳೂರಿನಲ್ಲಿ ಶೇಕಡಾ ೪೦ರಷ್ಟು ತಮಿಳರಿದ್ದಾರೆ
೨. ರಾಜ್‌ಕುಮಾರ್ ಕನ್ನಡಿಗನೇ ಅಲ್ಲ.
ಮತ್ತಿನ್ನೆಷ್ಟೋ....

ಕನ್ನಡಿಗರೇ...ನೀವು ಕೂಡಾ ಸ್ವಾಭಿಮಾನಿಗಳಾಗಿ...ಆದರೆ ತಮಿಳರಂತೆ ದುರಭಿಮಾನಿಗಳಾಗಬೇಡಿ.

Sunday, August 16, 2009

ಆಧುನಿಕ ಯುಗದ ಹೊಸ ತರಹದ ಭಿಕ್ಷಾಟನೆ

"ಸರ್ ನಮ್ಮ ಬಡಾವಣೆಯಲ್ಲಿ ಈ ಸಾರಿ ಗಣೇಶ ಕೂರಿಸುತ್ತಿದ್ದೇವೆ. ದಯವಿಟ್ಟು ಹಣ ಸಹಾಯ ಮಾಡಿ ಸಾರ್"
"ರೀ...ಕಳೆದ ಸಾರಿ ಕೇಳಿದಾಗ ಮುಂದಿನ ಸಲ ಕೊಡ್ತೀನಿ ಅಂದ್ರಲ್ಲಾ...ಈಗ ಬಂದಿದ್ದೀವಿ...ಚಂದಾ ಕೊಡಿ"
ಈ ಥರಾ ಹೊಸ ಶೈಲಿಯ ಡೈಲಾಗ್‍ಗಳನ್ನು ನೀವು ಈಗಾಗಲೇ ಕೇಳಲು ಶುರುಮಾಡಿರಬಹುದು. ಅದೇರೀ.....ಗೌರಿ ಗಣೇಶ ಹಬ್ಬ ಬರುತ್ತಿದೆಯಲ್ಲಾ. ಇದನ್ನೇ ಬಂಡವಾಳ ಮಾಡಿಕೊಂಡು ಕೆಲ ಅಪಾಪೋಲಿಗಳು, ಪುಡಿರೌಡಿಗಳು, ಪೋಕರಿಗಳು ಈಗಾಗಲೇ ಚಂದಾ ವಸೂಲಿಗೆ ಶುರು ಮಾಡಿದ್ದಾರೆ. ಮನೆ ಮನೆಗೆ ಭೇಟಿ ನೀಡುವ ಈ ನೀಚರು ಬಲವಂತವಾಗಿ, ಜೋರು ಮಾಡಿ, ಹೆದರಿಸಿ ಹಣ ಸುಲಿಗೆ ಮಾಡುತ್ತಿದ್ದಾರೆ. ಗಣೇಶನ ಹೆಸರಿನಲ್ಲಿ ಹಣ ವಸೂಲಿ ಮಾಡಿ, ಗಣೇಶನನ್ನು ನೀರಿಗೆ ಹಾಕಿದ ಮೇಲೆ, ಅನೇಕ ಮಂದಿ ಕುಡಿದು, ಅಮಲೇರಿ ಚರಂಡಿಯಲ್ಲಿ ಬಿದ್ದು ಹೊರಳಾಡಿ, ಅದರಲ್ಲೇ ಸಾರ್ಥಕತೆಯನ್ನು ಪಡೆಯುತ್ತಾರೆ. ತಮ್ಮ ಜೀವನ ಈ ಒಂದು ವರ್ಷದ ಮಟ್ಟಿಗೆ ಸಾರ್ಥಕವಾಯಿತು ಎಂದು ಭಾವಿಸಿ, ಮರುದಿನ ಏನೂ ನಡೆದೇ ಇಲ್ಲವೆಂಬಂತೆ ಮಾಮೂಲಿಯಾಗಿದ್ದುಬಿಡುತ್ತಾರೆ.

ಎಲ್ಲರೂ ಈ ಥರಾ ಮಾಡುತ್ತಾರೆಂದಲ್ಲ. ಇದರಲ್ಲಿ ಬೆರಳೆಣಿಕೆಯಷ್ಟು ಮಂದಿ ಮಾತ್ರ ಚಂದಾ ವಸೂಲು ಮಾಡಿದರೂ ಒಳ್ಳೆ ಕೆಲಸ ಕಾರ್ಯ ಹಮ್ಮಿಕೊಳ್ಳುತ್ತಾರೆ. ಶ್ರೀ. ಬಾಲಗಂಗಾಧರ ತಿಲಕರು ಈಗ ಬದುಕಿದ್ದಿದ್ದರೆ ಖಂಡಿತಾ ಈ ಜನ ಜನರ ಒಗ್ಗಟ್ಟಿಗೆ ಹುಟ್ಟು ಹಾಕಿದ ಈ ಗಣೇಶೋತ್ಸವವನ್ನು ನಿಷೇಧ ಮಾಡಿ ಎಂದು ಸರಕಾರವನ್ನು ಕೋರಿಕೊಳ್ಳುತ್ತಿದ್ದರೋ ಏನೋ.

ಬಡ ಮಕ್ಕಳಿಗೆ ಸಹಾಯ, ಬಡಾವಣೆಯಲ್ಲಿ ಹೊಸ ಶಾಲೆ ಪ್ರಾರಂಭ, ಅನಾಥಾಲಯಗಳಿಗೆ ಸಹಾಯ, ಹೊಸ ಆಸ್ಪತ್ರೆಗಳ ಪ್ರಾರಂಭಕ್ಕೆ ಸಹಾಯ....ಮುಂತಾದ ಒಳ್ಳೆಯ ಕಾರ್ಯಕ್ರಮಗಳನ್ನು ಈ ಸಂಘಟನೆಗಳು ಹಮ್ಮಿಕೊಂಡಲ್ಲಿ, ಈ ಸಾರ್ವಜನಿಕ ಗಣೇಶೋತ್ಸವಕ್ಕೆ ಒಂದು ಹೊಸ ಅರ್ಥ ಬರುತ್ತದೆ.

ಎಲ್ಲ ಸಂಘಟನೆಗಳಲ್ಲಿ ಮನವಿ ಎಂದರೆ..."ದಯವಿಟ್ಟು ಈ ಸಾರ್ವಜನಿಕ ಗಣೇಶೋತ್ಸವವನ್ನು ಒಳ್ಳೆಯ ಕಾರ್ಯಗಳಿಗೆ ಸಹಾಯವಾಗುವ ಹಾಗೆ ಮಾಡಿ. ಅನ್ಯಧರ್ಮೀಯರು ಕೇವಲವಾಗಿ ಮಾತಾಡುವ ಹಾಗೆ ಮಾಡಬೇಡಿ."
"ನಿಮ್ಮ ಕೈಯಲ್ಲಿ ಸಾಧ್ಯವಾದರೆ ನೀವೇ ಮಾಡಿ, ಅದಕ್ಕೆ ಬಲವಂತದ ಚಂದಾ ವಸೂಲಿ ಮಾಡಿ, ದ್ವೇಷದ ವಾತಾವರಣ ಸೃಷ್ಟಿಯಾಗುವ ಹಾಗೆ ದಯವಿಟ್ಟು ಮಾಡಬೇಡಿ."

"ಶ್ರೀ. ಬಾಲಗಂಗಾಧರ ತಿಲಕರ ಕನಸು ನನಸು ಮಾಡಿ"

Thursday, April 30, 2009

ಧಿಕ್ಕಾರವಿರಲಿ ಮತದಾನ ಮಾಡದವರಿಗೆ

ಬೆಂಗಳೂರು ಏಪ್ರಿಲ್ ೩೦: ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ನಮ್ಮ ದೇಶದ ಪ್ರತಿಶತ ೫೦ ರಷ್ಟು ಮತದಾರರು ತಮ್ಮ ಮತ ಚಲಾಯಿಸದೆ ತಮಗೆ ಈ ದೇಶದ ಬಗ್ಗೆ ಇರುವ ಗೌರವವನ್ನು ವಿಶ್ವಕ್ಕೇ ತೋರಿಸಿದ್ದಾರೆ. ಇಂತಹ ಬುದ್ದಿಹೀನ ಮತದಾರರಿಂದಾಗಿಯೇ ನಾವು ಪ್ರತೀಬಾರಿ ಅದಕ್ಷ, ಅನರ್ಹ ಸರಕಾರವನ್ನು ಪಡೆಯುತ್ತಿದ್ದೇವೆ.

ಅಲ್ಲ, ಈ ಜನಗಳಿಗೆ ಸರಕಾರವನ್ನು, ರಾಜಕಾರಣಿಗಳನ್ನು ಟೀಕಿಸುವುದಕ್ಕೆ ಸಮಯ ಬೇಕಾದಷ್ಟಿದೆ. ಅಲ್ಲದೇ ಅದು ತಮ್ಮ ಜನ್ಮ ಸಿದ್ದ ಹಕ್ಕು ಎಂದುಕೊಂಡು ರಾಜಕಾರಣಿಗಳನ್ನು, ಸರಕಾರಗಳನ್ನು ಬಾಯಿಗೆ ಬಂದಂತೆ ಬಯ್ಯುತ್ತಾ ಕಾಲಕಳೆಯುತ್ತಿದ್ದರೂ, ಇಂತಹ ಸರಕಾರಗಳ ಹುಟ್ಟಿಗೆ ತಾವೇ ಪರೋಕ್ಷ ಕಾರಣವೆಂಬ ತಿಳಿವಳಿಕೆ ಇಲ್ಲದಿರುವುದು ಈ ಜನರ ಮುಠ್ಠಾಳತನವನ್ನು ತೋರಿಸುತ್ತದೆ.

ಮತದಾನವೆಂಬುದು ತಮ್ಮ ಹಕ್ಕು. ಒಂದು ಉತ್ತಮ ಸರಕಾರದ ಜನನಕ್ಕೆ ಕಾರಣವಾಗುತ್ತದೆ, ಉತ್ತಮ ರಾಜಕಾರಣಿಗಳ ಆಯ್ಕೆಗೆ ಸಹಕಾರಿಯಾಗುತ್ತದೆ ಎಂಬ ಕನಿಷ್ಟ ಪರಿಜ್ಞಾನವೂ ಅವರಿಗೆ ಇಲ್ಲದಿರುವುದು ಒಂದು ರಾಷ್ಟ್ರೀಯ ದುರಂತವೆನ್ನಬಹುದು. ಬಹುತೇಕ ವಿದ್ಯಾವಂತರೇ ಈ ಗುಂಪಿಗೆ ಸೇರಿರುವುದು ನಾಚಿಕೆಗೇಡು.

"ಈ ಜನರಿಗೆ ಯಾವತ್ತೂ ಬುದ್ದಿ ಬರುವುದಿಲ್ಲ...."....ಅಲ್ಲರೀ ವೋಟು ಯಾರಿಗೆ ಬೇಕಾದರೂ ಹಾಕಿ.... ಅದರೆ ಮತದಾನ ಮಾತ್ರ ಮಾಡದಿರಬೇಡಿ. ನೀವು ಮತದಾನ ಮಾಡದಿರುವುದರಿಂದ ಅಯೋಗ್ಯ ಸರಕಾರಗಳು ಅಧಿಕಾರ ಹಿಡಿಯುತ್ತವೆ. ಅಯೋಗ್ಯ ರಾಜಕಾರಣಿಗಳು ಆಯ್ಕೆ ಆಗುತ್ತಾರೆ. ಅಯೋಗ್ಯ ಪಕ್ಷಗಳು ಚಿಗುರಿಕೊಳ್ಳುತ್ತವೆ. ಅದೂ ಅಲ್ಲದೆ ಸಿಲಿಕಾನ್ ಕಣಿವೆ ಎಂದು ಹೆಸರಾದ ಉದ್ಯಾನನಗರಿಯಲ್ಲಿಯೇ ಕನಿಷ್ಥ ಮತದಾನವಾಗಿರುವುದು ಬಹಳ ಚಿಂತೆಯ ವಿಷಯ. ಧಿಕ್ಕಾರವಿರಲಿ ಈ ವಿದ್ಯಾವಂತ ಬುದ್ದಿಹೀನರಿಗೆ .

Saturday, April 18, 2009

ನನ್ನ ಮತ ಮಾರಾಟಕ್ಕೆ ಇದೆ....!!!!

ಬೆಂಗಳೂರು ಎಪ್ರಿಲ್ ೧೮: ಮತದಾನದ ದಿನ ಹತ್ತಿರ ಬರುತ್ತಿದ್ದಂತೆ ಎಲ್ಲರಿಗೂ ಎನೋ ಒಂಥರಾ ಮಜಾ. ಕೆಲ ಜನರಿಗೆ ಹೆಂಡ, ಸಾರಾಯಿ, ಹಣ ಮುಂತಾದವುಗಳನ್ನು ತೆಗೆದುಕೊಂಡು ಖುಷಿ ಪಡುವ ದಿನ. ಪ್ರತೀ ವರ್ಷ ಈ ಥರಾ ಚುನಾವಣೆಗಳು ಬರಬಾರದೇ ಎಂಬ ಆಸೆ. ಅದೇ ಥರಾ ನನಗೂ ಒಂದು ಆಸೆ ಇದೆ ಮರಾಯ್ರೆ!!!!

ಅಂದರೆ ನನ್ನ ಅಮೂಲ್ಯವಾದ ಮತವನ್ನು ಮಾರಿಕೊಳ್ಳುವುದು. ಇವರಿಗೆ ಮತ ಹಾಕಿ ಐದು ವರ್ಷದಲ್ಲಿ ಕಿತ್ತು ಗಡ್ಡೆ ಹಾಕಿರುವುದು ಅಷ್ಟರಲ್ಲೇ ಇದೆ. ಸ್ವಲ್ಪ ದುಡ್ಡಾದರೂ ಅವರಿಂದ ಕಿತ್ತುಕೊಂಡರೆ ಹಾಕಿದ ಮತಕ್ಕಾದರೂ ಕವಡೆ ಕಿಮ್ಮತ್ತಿನ ಬೆಲೆ ಬರಬಹುದೇನೋ ಎಂಬ ಆಸೆ. ಅಂದರೆ ನನ್ನ ಕಂಡೀಷನ್ನು ಏನು ಇಲ್ಲ. ಯಾರು ಎಷ್ಟು ಹೆಚ್ಚು ಹಣ ಕೊಡುತ್ತಾರೋ ಅವರಿಗೇ ನನ್ನ ಮತ. ಏಕೆಂದರೆ ಇದುವರೆಗೆ ಆಳಿ ಹೋದ ಅಳಿದು ಹೋದ ಜನನಾಯಕರಿಂದ ನನಗಂತೂ ಪುಟಗೋಸಿಯ ಉಪಕಾರ ಆಗಿಲ್ಲ. ಉಪಕಾರಕ್ಕಿಂತ ಉಪದ್ರವೇ ಹೆಚ್ಚು ಎನ್ನಬಹುದು. ಈಗ ಕರ್ನಾಟಕದಲ್ಲಿರುವ ಇಪ್ಪತ್ತೆಂಟು ಲೋಕಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಿರುವ ಒಬ್ಬನೇ ಒಬ್ಬ ಅಭ್ಯರ್ಥಿ ಕರ್ನಾಟಕದ ಜನರ ಕೂಗಿಗೆ ಸ್ಪಂದಿಸಬಲ್ಲಂತಹ ಅರ್ಹತೆ ಹೊಂದಿಲ್ಲ. ಕೇವಲ ದುಡ್ಡು ಮಾಡಿಕೊಳ್ಳುವುದು ಹೇಗೆ, ಜನರ ತಲೆ ಹೊಡೆಯುವುದು ಹೇಗೆ ಎಂಬ ಚಿಂತೆಯಲ್ಲೇ ಮುಳುಗಿರುವ ಈ ನಾಲಯಕ್ ಮಂದಿಗೆ ಓಟು ಕೊಟ್ಟರೆಷ್ಟು ಬಿಟ್ಟರೆಷ್ಟು?. ಆದ್ದರಿಂದ ನಾನು ನನ್ನ ಮತವನ್ನು ಬಹಿರಂಗವಾಗಿ ಹರಾಜಿಗೆ ಇಟ್ಟಿದ್ದೇನೆ. ಯಾರಾದರೂ ಹೆಚ್ಚಿನ ಹಣ ಕೊಟ್ಟಲ್ಲಿ, ಅವ ಎಂಥಹಾ ಕ್ರಿಮಿನಲ್ ಆಗಿರಲಿ, ಕೊಲೆಗಾರ ಆಗಿರಲಿ, ರೇಪಿಸ್ಟ್ ಆಗಿರಲಿ ಅವನಿಗೇ ನನ್ನ ಮತ. ಏಕೆಂದರೆ ಒಮ್ಮೆ ಮತ ಕೊಟ್ಟಮೇಲೆ ಅವ ಮತ್ತೆ ಮುಖ ತೋರಿಸುವುದು ಮುಂದಿನ ಚುನಾವಣೆಯಲ್ಲಿ ಮಾತ್ರ. ಅಲ್ಲದೆ ಕ್ಷೇತ್ರದ ಸಮಸ್ಯೆ, ಜನರ ಸಮಸ್ಯೆ, ರಾಜ್ಯದ ಸಮಸ್ಯೆ ಇವರಿಗೆ ಕಿತ್ತು ಹೋದ ಚಪ್ಪಲಿಗೆ ಸಮ.

ಈ ಮೂಲಕ ನಾನು ಎಲ್ಲ ರಾಜಕೀಯ ಪಕ್ಷಗಳಿಗೆ ಮುಕ್ತವಾದ ಒಂದು ಆಹ್ವಾನ ನೀಡುತ್ತಿದ್ದೇನೆ. ಈ ಬಹಿರಂಗ ಹರಾಜಿನಲ್ಲಿ ಯಾರು ಅತೀ ಹೆಚ್ಚಿನ ಮೊತ್ತ ದಾಖಲಿಸುತ್ತಾರೋ ಅವರಿಗೇ ನನ್ನ ಮತ. ಕೂಡಲೇ ಇದರಲ್ಲಿ ಭಾಗವಹಿಸುವ ರಾಜಕೀಯ ಪಕ್ಷಗಳು ಕೂಡಲೇ ನನ್ನನ್ನು ಸಂಪರ್ಕಿಸಬೇಕಾಗಿ ವಿನಂತಿ. ಹರಾಜು ಪ್ರಾರಂಭವಾಗುವ ಮೊತ್ತ ರೂ.೫೦೦೦/-. ಇದಕ್ಕಿಂತ ಜಾಸ್ತಿ ಕೂಗಿ ನಿಮ್ಮ ಪಕ್ಷಕ್ಕೆ ನನ್ನ ಮತ ಬೀಳುವ ಹಾಗೆ ನೋಡಿಕೊಳ್ಳಿ.

ಎಚ್ಚರಿಕೆ:ನನ್ನ ಒಂದು ಮತ ನಿಮ್ಮ ಭವಿಷ್ಯ ನಿರ್ಧರಿಸಬಹುದು.

Tuesday, March 24, 2009

ಕರ್ನಾಟಕದ ದುರಾದೃಷ್ಟ...ಎಲ್ಲರೂ ಕೀಚಕರೇ...

ಬೆಂಗಳೂರು ಮಾರ್ಚ್ ೨೨: ಇತ್ತೀಚೆಗೆ ಬೆಳಗಾವಿಯಲ್ಲಿ ಕನ್ನಡ ಸಂಸದ ಸುರೇಶ್ ಅಂಗಡಿ ಹಾಗೂ ಶಾಸಕ ಸಂಜಯ ಪಾಟೀಲ್ ಎಂಬವರು ಕನ್ನಡದ್ರೋಹದ ಕೆಲಸವನ್ನು ಮಾಡಿರುವುದು ಕಳವಳಕಾರಿ ಘಟನೆಯಾಗಿದೆ. ಇದನ್ನು ಸಮರ್ಥಿಸಿಕೊಂಡ ಮಾನ್ಯ ಮುಖ್ಯಮಂತ್ರಿಗಳ ವೈಖರಿ ನೋಡಿದರೆ ಬಿ.ಜೆ.ಪಿ.ಯ ಕರ್ನಾಟಕ ದ್ರೋಹ ನಿಧಾನವಾಗಿ ಬಯಲಾಗುತ್ತಿದೆ.

ಕರ್ನಾಟಕದಲ್ಲಿ ಸದಾ ಅಧಿಕಾರ ಸವಿ ಸವಿದು ಖಜಾನೆ ಲೂಟಿ ಹೊಡೆದು ಚಿಕ್ಕಾಸಿನ ಕೆಲಸ ಮಾಡದ ಕಾಂಗ್ರೆಸ್ ಎಂಬ ರಾಷ್ಟ್ರೀಯ ಪಕ್ಷಕ್ಕೆ ಸಡ್ಡು ಹೊಡೆಯುವ ಮತ್ತೊಂದು ಪಕ್ಷ ಇಲ್ಲದಿದ್ದುದು ನಮ್ಮ ಕನ್ನಡಿಗರಿಗೆ ಒಂದು ನಿರಾಸೆಯ ವಿಷಯವಾಗಿತ್ತು. ಆದರೆ ಭಾರತೀಯ ಜನತಾ ಪಾರ್ಟಿ ಮರೀಚಿಕೆಯಂತೆ ಮೈಕೊಡವಿ ಎದ್ದು ಬಂದು ರಾಜ್ಯದ ಗದ್ದುಗೆ ಹಿಡಿದಾಗ ಎಲ್ಲರಿಗಿಂತ ಸಂತಸ ಪಟ್ಟವ ನಾನು. ಸದ್ಯ ಈಗಲಾದರೂ ಕರ್ನಾಟಕದ, ಕನ್ನಡದ ಅಭಿವೃದ್ದಿ ಖಂಡಿತಾ ಸಾಧ್ಯವಾಗುತ್ತದೆ ಎಂಬ ನನ್ನ ಕನಸು ಇತ್ತೀಚೆಗೆ ಸುಳ್ಳಾಗತೊಡಗಿದೆ. ಏಕೆಂದರೆ ಇತ್ತೀಚೆಗೆ ಬಿ.ಜೆ.ಪಿ. ಮಂದಿ ರಾಷ್ಟ್ರೀಯ ದೃಷ್ಟಿಕೋನದ ನೆಪದಲ್ಲಿ ಕರ್ನಾಟಕ ಹಾಗೂ ಕನ್ನಡವನ್ನು ಮರೆತು ಈ ರಾಜ್ಯಕ್ಕೆ ವಿರುದ್ಧವಾಗಿ ಕೆಲಸ ಮಾಡುತ್ತಿರುವುದು ಕಳವಳಕಾರಿಯಾಗಿದೆ.

ಬಳ್ಳಾರಿಯಲ್ಲಿ ಆಂಧ್ರದ ಪ್ರಖ್ಯಾತ ಖದೀಮರಾದ ರೆಡ್ಡಿ ಸಹೋದರರು ಗಣಿ ಲೂಟಿ ಮಾಡಿ, ಕನ್ನಡದ ನೆಲವನ್ನು ಆಂಧ್ರಕ್ಕೆ ಮಾರುವಷ್ಟರ ಮಟ್ಟಿಗೆ ಬೆಳೆದಿರುವುದು ಹಾಗೂ ಜನರ ಹಿತಕ್ಕೆ ವಿರುದ್ಧವಾದ ಕೆಲಸ ( ಇಂಜಿನಿಯರಿಂಗ್ ಕಾಲೇಜನ್ನು ಸ್ಥಳಾಂತರ ಮಾಡಿದ್ದು ಮೊದಲಾದ) ಮಾಡುತ್ತಿರುವುದು ಇದರಲ್ಲಿ ಪ್ರಮುಖವಾಗಿದೆ. ಹಾಗೂ ಬೆಳಗಾವಿಯಲ್ಲಿ ಕೇವಲ ಪುಟಗೋಸಿ ಮರಾಠಿ ವೋಟಿಗಾಗಿ ಅವರ ಕಾಲು ನೆಕ್ಕಿ ಬೆಳಗಾವಿ ನಗರಪಾಲಿಕೆಯಲ್ಲಿ ಮರಾಠಿ ಧ್ವಜ ಹಾರುವಂತೆ ಮಾಡಿದ ಬಿ.ಜೆ.ಪಿ. ಸಂಸದ, ಕನ್ನಡ ದ್ರೋಹಿ, ಕರ್ನಾಟಕ ದ್ರೋಹಿ ಸುರೇಶ್ ಅಂಗಡಿ ಹಾಗೂ ಸಂಜಯ ಪಾಟೀಲ್ ಎಂಬ ದುಷ್ಟರಿಗೆ ಮುಖ್ಯಮಂತ್ರಿಗಳೇ ಬೆಂಬಲದ ಮಾತಾಡಿದರೆ ವೀರ ಕನ್ನಡಿಗರ ರಕ್ತ ಕುದಿಯದಿರುತ್ತದೆಯೇ?.

ರಾಷ್ಟ್ರೀಯವಾಗಿ ಚಿಂತನೆ ಮಾಡಬೇಕೆಂಬ ಕೆಲವರ ವಾದ ನಿಜವಾಗಿರಬಹುದು, ಆದರೆ ಇಂದು ಎನ್.ಸಿ.ಪಿ ಹಾಗೂ ಶಿವಸೇನೆ ಮಾಡುತ್ತಿರುವುದು ಏನು?. ಕೇವಲ ಪ್ರಾದೇಶಿಕ ಚಿಂತನೆಯ ಮಟ್ಟಕ್ಕೆ ಈ ಪಕ್ಷಗಳು ಇಳಿದಿರುವುದು ಅವುಗಳ ಬೌದ್ಧಿಕ ದಿವಾಳಿತನವನ್ನು ತೋರಿಸುತ್ತದೆ, ಹಾಗೂ ಅವುಗಳ ಜನಪ್ರಿಯತೆ ಕುಸಿದಿರುವುದಕ್ಕೆ ಸಾಕ್ಷಿಯಾಗಿದೆ. ಈಗ ಕರ್ನಾಟಕದ ಬಿ.ಜೆ.ಪಿ.ಯೂ ಅದೇ ಹಾದಿಯನ್ನು ಹಿಡಿದಿರುವುದು, ಓಟು ಕೊಟ್ಟು ಗೆಲ್ಲಿಸಿದ ಕನ್ನಡಿಗರಿಗೆ ಮಾಡುತ್ತಿರುವ ದ್ರೋಹವಲ್ಲದೆ ಮತ್ತೇನು?. ಕರ್ನಾಟಕದಲ್ಲಿ ಕನ್ನಡಿಗನೇ ಸಾರ್ವಭೌಮ......ಈಗ ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕನ್ನಡಿಗರು ಎಚ್ಚೆತ್ತುಕೊಳ್ಳಬೇಕಾಗಿದೆ. ಈ ಬಿ.ಜೆ.ಪಿ. ಮಂದಿ ಕನ್ನಡಿಗರಿಗೆ ಅನ್ಯಾಯ ಮಾಡುವುದಿಲ್ಲ ಎಂಬುದು ಯಾವ ಖಾತರಿ?. ಈ ಮುಖ್ಯಮಂತ್ರಿಯಂತೂ ತನ್ನ ಕ್ಷೇತ್ರದಲ್ಲಿ ಹಣದ ಹೊಳೆಯನ್ನೇ ಸುರಿಯುತ್ತಿರುವುದು, ತನ್ನ ಬುಡ ಗಟ್ಟಿ ಮಾಡಿಕೊಳ್ಳುವ ತಂತ್ರವಲ್ಲದೇ ಮತ್ತೇನು?.

ಇತ್ತೀಚೆಗೆ ಬಿ.ಜೆ.ಪಿ ಮಂದಿ ಪದ್ಮನಾಭನಗರ ಕ್ಷೇತ್ರದಲ್ಲಿ "ಜನಪದ ಜಾತ್ರೆ" ನಡೆಸಿದ್ದರು. ಅಲ್ಲಿ ಎಲ್ಲ ಬಿ.ಜೆ.ಪಿ. ಮಂದಿ ತಾವು ಮಾತ್ರ ರಾಷ್ಟ್ರ ಭಕ್ತರೆಂದು ತೋರಿಸಿಕೊಳ್ಳುತ್ತಾ, ಮೊದಲು ದೇಶ..ಆಮೇಲೆ ಕರ್ನಾಟಕ ಎಂಬ "ತಿಕ್ಕಲು" ಮಾತು ಆಡಿದರು. ಮೊದಲು ರಾಜ್ಯ, ಆಮೇಲೆ ದೇಶ ಎಂಬ ಕನಿಷ್ಠ ಪರಿಜ್ಞಾನವೂ ಇಲ್ಲದ ಈ ಮಂದಿಯಿಂದ ಕನ್ನಡದ, ಕರ್ನಾಟಕದ ಉದ್ದಾರ ಹೇಗೆ ಸಾಧ್ಯ?. ಜನರಲ್ಲಿ ಪ್ರಾದೇಶಿಕ ಭಾವನೆ ಬಲವಾಗಿ ಬೇರೂರಿದಾಗಲೇ ಆ ರಾಜ್ಯದ ಅಭಿವೃದ್ದಿ ಆಗಲು ಸಾಧ್ಯ. ನೆರೆಯ ತಮಿಳುನಾಡು, ಆಂಧ್ರದಲ್ಲಿ ಆದಂತೆ ನಮ್ಮ ರಾಜ್ಯದಲ್ಲಿ ಕೂಡಾ ಪ್ರಾದೇಶಿಕ ಮಟ್ಟದಲ್ಲಿ ಚಿಂತನೆ ನಡೆಯಬೇಕಾದ ಅಗತ್ಯವಿದೆ. ಹಾಗಾಗಿ ಬಿ.ಜೆ.ಪಿ. ಮಂದಿ ಇದೇ ಥರಾ ಮುಂದುವರಿದರೆ ಮುಂದೆ ಮತ್ತೆ ಕಾಂಗ್ರೆಸ್‌ಗೆ ಅಧಿಕಾರವನ್ನು ಬೆಳ್ಳಿತಟ್ಟೆಯಲ್ಲಿ ಇಟ್ಟು ಕೊಟ್ಟ ಹಾಗಾಗುತ್ತದೆ. ಅಲ್ಲದೆ ಸದ್ಯಕ್ಕೆ ಪ್ರಾದೇಶಿಕ ಪಕ್ಷವೆಂದೇ ಗುರುತಿಸಿಕೊಂಡಿರುವ ಜೆ.ಡಿ.ಎಸ್. ಎಂಬ ಪಕ್ಷ ಅಪ್ಪ-ಮಕ್ಕಳ ಪಕ್ಷವಾಗಿ...ಸರಿಯಾದ ಗುರಿ ಇಲ್ಲದೆ ಕೇವಲ ಸ್ವಂತ ಅಭಿವೃದ್ದಿಯನ್ನೇ ಗುರಿಯಾಗಿಸಿಕೊಂಡು ಗುರುತಿಸಿಕೊಂಡಿದೆ.

ಈ ಬಿ.ಜೆ.ಪಿ. ತನ್ನ ಕೈಯಾರೆ ತನ್ನ ಪಕ್ಷವನ್ನು ಕಿಚ್ಚಿಟ್ಟು ಸಾಯಿಸುತ್ತಿದೆ. ಮುಖ್ಯಮಂತ್ರಿಯ ಗೊತ್ತುಗುರಿಯಿಲ್ಲದ ಕೆಲವು ನಿರ್ಧಾರಗಳು, ಹೊಗೇನಕಲ್ ವಿವಾದದಲ್ಲಿ ತೋರಿಸಲಾಗದ ಕಠೋರತೆ, ಗಣಿ ಲೂಟಿಯನ್ನು ತಡೆಯಲಾಗದ ನಾಮರ್ದತೆ, ನಗರದಲ್ಲಿ ಭಯೋತ್ಪಾದನೆ ಪರ ತಮಿಳರ ಜಾಥಾಗೆ ಅವಕಾಶ ಮಾಡಿಕೊಟ್ಟು ನಗರದಲ್ಲಿ ತಮಿಳರ ಪ್ರಭಾವ ಹೆಚ್ಚುವಂತೆ ಮಾಡಿದ್ದು...ಈ ಸರಕಾರದ ನಿರ್ವೀರ್ಯತೆಯನ್ನು ತೋರಿಸುತ್ತದೆ. ಇದೇ ರೀತಿ ಕರ್ನಾಟಕದ ವಿರುದ್ದ ಈ ಮಂದಿ ಕಾರ್ಯ ಕೈಗೊಂಡರೆ ಮುಂದೊಂದು ದಿನ ಕರ್ನಾಟಕದಲ್ಲಿ ಬಿ.ಜೆ.ಪಿ. ಇತ್ತು ಎನ್ನುವುದು ಇತಿಹಾಸವಾಗಬೇಕಾಗುತ್ತದೆ.